ಕಾರು ಚಾಲಕ ನಿಯಂತ್ರಣ ತಪ್ಪಿ ಸೇತುವೆಯಿಂದ 40 ಅಡಿ ಕೆಳಗೆ ಬಿದ್ದ ಪರಿಣಾಮ ಏಳು ಮಂದಿ ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ವಾರ್ಧಾದ ಸೆಲ್ಲಸೂರ ಬಳಿ ಸಂಭವಿಸಿದೆ.
ಅಪಘಾತದಲ್ಲಿ ಬಿಜೆಪಿ ಶಾಸಕ ವಿಜಯ್ ರಹಂಗ್ ಡೇಲ್ ಪುತ್ರ ಸೇರಿದಂತೆ ವೈದ್ಯಕೀಯ ಕಾಲೇಜಿನ ಏಳು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತಪಟ್ಟ ಏಳು ಮಂದಿ ವಿದ್ಯಾರ್ಥಿಗಳು ಸಾವಂಗಿ ವೈದ್ಯಕೀ ಕಾಲೇಜಿನ ಮೊದಲ ವರ್ಷದ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.
ಸೋಮವಾರ ತಡರಾತ್ರಿ ಈ ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಸುಮಾರು 40 ಅಡಿಗಳಷ್ಟು ಕೆಳಗೆ ಬಿದ್ದಿದೆ ಎಂದು ಪೊಲೀಸರು ಹೇಳಿದ್ದಾರೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ ಏಳು ಮಂದಿಯೂ ಮರಣ ಹೊಂದಿದ್ದಾರೆ. ಕ್ಸೈಲೋ ಕಾರು ದೇವ್ಲಿಯಿಂದ ವಾರ್ಧಾಕ್ಕೆ ತೆರಳುತ್ತಿತ್ತು. ಈ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ಗೋಡೆಗೆ ಡಿಕ್ಕಿ ಹೊಡೆದು ಕೆಳಕ್ಕೆ ಬಿತ್ತು ಎಂದು ಹೇಳಲಾಗಿದೆ.