Sunday, March 8, 2026
Google search engine
Homeಮುಖಪುಟಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಜೊತೆ ಮಾತನಾಡುತ್ತೇನೆ - ಡಿ.ಕೆ.ಶಿವಕುಮಾರ್

ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಜೊತೆ ಮಾತನಾಡುತ್ತೇನೆ – ಡಿ.ಕೆ.ಶಿವಕುಮಾರ್

ಸ್ನೇಹಿತರಿಗೆ ಅಸಮಾಧಾನ ಇರುವುದರಿಂದ ಹಾಗೆ ಮಾತನಾಡಿದ್ದಾರೆ. ನಮ್ಮ ಸ್ನೇಹಿತರು, ಒಳ್ಳೆಯದು ಬಯಸಿದ್ದಾರೆ. ಪಕ್ಷಕ್ಕಾಗಿ ದುಡಿದಿದ್ದಾರೆ. ಹೀಗಾಗಿ ಖಂಡಿತವಾಗಿಯೂ ಮಾತನಾಡುತ್ತೇನೆ ಎಂದು ಖಚಿತಪಡಿಸಿದರು.

ಕಾಂಗ್ರೆಸ್ ಬಗ್ಗೆ ಮುನಿಸಿಕೊಂಡಿರುವ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಜೊತೆ ಮಾತುಕತೆ ನಡೆಸಿ ಸಮಸ್ಯೆಯನ್ನು ಬಗೆಹರಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇಬ್ರಾಹಿಂ ಹಿರಿಯ ನಾಯಕರು. ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿ ಕೆಲಸ ಮಾಡಿದ್ದಾರೆ. ಯೋಜನಾ ಆಯೋಗದ ಮುಖ್ಯಸ್ಥರನ್ನಾಗಿ ಮಾಡಲಾಗಿತ್ತು. ಎರಡು ಬಾರಿ ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಲಾಗಿದೆ. ಅಲ್ಲಿ ಉತ್ತಮ ಕೆಲಸ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಸ್ನೇಹಿತರಿಗೆ ಅಸಮಾಧಾನ ಇರುವುದರಿಂದ ಹಾಗೆ ಮಾತನಾಡಿದ್ದಾರೆ. ನಮ್ಮ ಸ್ನೇಹಿತರು, ಒಳ್ಳೆಯದು ಬಯಸಿದ್ದಾರೆ. ಪಕ್ಷಕ್ಕಾಗಿ ದುಡಿದಿದ್ದಾರೆ. ಹೀಗಾಗಿ ಖಂಡಿತವಾಗಿಯೂ ಮಾತನಾಡುತ್ತೇನೆ ಎಂದು ಖಚಿತಪಡಿಸಿದರು.

ಇಬ್ರಾಹಿಂದ ಕಾಂಗ್ರೆಸ್ ಪಕ್ಷದ ಸದಸ್ಯರು, ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿದೆ ನೋವಿದೆ. ಅದನ್ನು ಗಂಭೀರವಾಗಿ ತೆಗೆದುಕೊಳ್ಳಬಾರದು ಎಂದು ಹೇಳಿದರು.

ಕಾಂಗ್ರೆಸ್ ನಲ್ಲಿ ಇಬ್ರಾಹಿಂ, ನಾನು, ಸಿದ್ದರಾಮಯ್ಯ ಅವರು ಸೇರಿದಂತೆ ಯಾರೂ ತಬ್ಬಲಿಯಾಗಿಲ್ಲ. ನಾವೆಲ್ಲಾ ಒಂದೇ’ ಎಂದು ಪುನರುಚ್ಚರಿಸಿದರು.

ನಾವು ರಾಜ್ಯದ ಹಿತಕ್ಕಾಗಿ ಪಾದಯಾತ್ರೆ ಮಾಡಿದಾಗ ನಮ್ಮ ಮೇಲೆ ಕೇಸ್ ದಾಖಲಿಸಿದ್ದಾರೆ. ಈ ವಿಚಾರವಾಗಿ ಮುಖ್ಯಮಂತ್ರಿಗಳು, ಪೊಲೀಸ್ ಮಹಾನಿರ್ದೇಶಕರು, ಗೃಹಮಂತ್ರಿಗಳು ಗಮನಹರಿಸಲಿ. ರಾಜ್ಯಾದ್ಯಂತ ಬಿಜೆಪಿ ನಾಯಕರು ಸಾಕಷ್ಟು ಬಾರಿ ನಿಯಮ ಉಲ್ಲಂಘಿಸಿದ್ದಾರೆ ಆದರೂ ಕ್ರಮ ಜರುಗಿಸಿಲ್ಲ ಎಂದು ದೂರಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular