ಪಕ್ಷ, ಕಾರ್ಯಕರ್ತರು ಮತ್ತು ಪಂಜಾಬ್ ಬಯಸಿದರೆ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ಘೋಷಿಸಲಾಗುವುದು ಎಂದು ಎಐಸಿಸಿ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.
ನವಜೋತ್ ಸಿಂಗ್ ಸಿದ್ದು ವರ್ಸಸ್ ಚರಂಜಿತ್ ಸಿಂಗ್ ಚನ್ನಿ ಪೈಪೋಟಿಯ ನಡುವೆ ಇಬ್ಬರನ್ನು ಮುನ್ನಡೆಸಲು ಸಾಧ್ಯವಿಲ್ಲ. ಆದ್ದರಿಂದ ಒಬ್ಬರೇ ಮುಖ್ಯಮಂತ್ರಿಯನ್ನು ಘೋಷಿಸಲು ಸಾಧ್ಯ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಅಭ್ಯರ್ಥಿಯನ್ನು ನಿರ್ಧರಿಸಲು ನಾವು ಕಾಂಗ್ರೆಸ್ ಕಾರ್ಯಕರ್ತರನ್ನು ಕೇಳುತ್ತೇವೆ ಎಂಬುದನ್ನು ಜಲಂಧರ್ ನಲ್ಲಿ ನಡೆದ ಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ್ದಾರೆ.
ಮುಖ್ಯಮಂತ್ರಿಯನ್ನಾಗಿ ಇಬ್ಬರನ್ನು ಮುನ್ನಡೆಸಲು ಸಾಧ್ಯವಿಲ್ಲ. ಒಬ್ಬರು ಮಾತ್ರ ಮುನ್ನಡೆಸಬಹುದು. ಒಬ್ಬರು ಮುನ್ನಡೆಸಿದರೆ, ಇನ್ನೊಬ್ಬರು ಎಲ್ಲಾ ರೀತಿಯ ಬೆಂಬಲವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ. ಇಬ್ಬರ ಹೃದಯದಲ್ಲಿ ಕಾಂಗ್ರೆಸ್ ಚಿಂತನೆಗಳು ಇವೆ ಎಂದು ಪ್ರತಿಪಾದಿಸಿದ್ದಾರೆ.
ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಧು ಮತ್ತು ಮುಖ್ಯಮಂತ್ರಿ ಚರಂಜಿತ್ ಚನ್ನಿ ಅವರು ಮುಖ್ಯಮಂತ್ರಿ ಹುದ್ದೆಗಾಗಿ ಹಾತೊರೆಯುವುದಿಲ್ಲ ಎಂದು ಬಹಿರಂಗವಾಗಿ ಹೇಳಿದ ನಂತರ ರಾಹುಲ್ ಮಾತನಾಡಿದ್ದಾರೆ.
ಪಂಜಾಬ್ ನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯ ಕುರಿತು ತಮ್ಮ ನಿರ್ಧಾರವ್ನು ಒಪ್ಪಿಕೊಳ್ಳುವುದಾಗಿ ನವಜೋತ್ ಸಿಧು ರಾಹುಲ್ ಗಾಂಧಿಗೆ ಭರವಸೆ ನೀಡಿದ್ದಾರೆ.
ಜನರ ಮನಸ್ಸಿನಲ್ಲಿ ಈ ಪ್ರಶ್ನೆ ಇದೆ. ಈ ಬಿಕ್ಕಟ್ಟಿನಿಂದ ಅವರನ್ನು ಯಾರು ರಕ್ಷಿಸುತ್ತಾರೆ, ಮಾರ್ಗಸೂಚಿ ಏನು. ಈ ಸುಧಾರಣೆಗಳನ್ನು ಜಾರಿಗೆ ತರುವ ಮುಖ ಯಾರದ್ದು ಎಂದು ಸಿಧು ಹೇಳಿದರು.
ಶಿಸ್ತಿನ ಸಿಪಾಯಿಯಂತೆ ನಾನು ರಾಹುಲ್ ಗಾಂಧಿ ಅವರ ನಿರ್ಧಾರಕ್ಕೆ ಬದ್ದನಾಗಿರುತ್ತೇನೆ ಎಂದು ಭರವಸೆ ನೀಡುತ್ತೇನೆ ಎಂದು ಸಿಧು ತಿಳಿಸಿದ್ದಾರೆ.


