ಕನ್ನಡದ ಕೆಚ್ಚನ್ನು ಮಣಿಸಿ ಕರ್ನಾಟಕವನ್ನು ಸಾಂಸ್ಕೃತಿಕವಾಗಿ ಬೆಂಗಾಡು ಮಾಡುವ ಸಕಲ ಪ್ರಯತ್ನವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಇದಕ್ಕೆ ನಿದರ್ಶನವೆಂಬಂತೆ ಈಗ ನೇರವಾಗಿ ಕನ್ನಡದ ಎದೆಯ ಮೇಲೆ ಕಾಲಿಡುವ ದೃಷ್ಟ ಸಂಚು ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ ಎಂದು ಹೇಳಿದ್ದಾರೆ.
ಎಫ್ ಎಂ ರೇನ್ ಬೋದ ಬಹುತೇಕ ನಿರೂಪಕರು ಅರೆಕಾಲಿಕ ಉದ್ಯೋಗಿಗಳು, ಸ್ಪಷ್ಟ ಕನ್ನಡ, ಅಚ್ಚ ಕನ್ನಡದ ರಾಯಭಾರಿಗಳು, ಅರ್ಥಪೂರ್ಣ ಕಾರ್ಯಕ್ರಮ, ಸುಶ್ರಾವ್ಯ ಹಾಡುಗಳ ಮೂಲಕ ಕೇಳುಗರೊಂದಿಗೆ ಸಂವಾದಿಯಾದವರು ಎಂದು ತಿಳಿಸಿದ್ದಾರೆ.
ಈಗ ವಾಹಿನಿಯನ್ನೇ ನಿಲ್ಲಿಸುವ ಒಳಸಂಚು ನಡೆಯುತ್ತಿದ್ದು ಇವರೆಲ್ಲರಿಗೂ ಆಗುವ ಅನ್ಯಾಯ ಹಾಗೂ ಕನ್ನಡ ಕನ್ನಡಿಗರಿಗೆ ಮಾಡುವ ಅಪಚಾರ ಎಂದು ಆಕ್ರೋಶ ವ್ಯಕ್ತಪಡಿದರು.
ಕನ್ನಡಿಗರಿಗೆ ಕಿರುಕುಳ ನೀಡಿ ವಿಕೃತ ಸಂತೋಷಪಡುವ ಮನಃಸ್ಥಿತಿ ಅಳಿಯಬೆಕು. ಭಾರತ ಒಕ್ಕೂಟ ರಾಜ್ಯಗಳ ಆಗರ ಎನ್ನುವುದು ನೆನಪಿಡಬೇಕು. ಆ ಆಶಯಕ್ಕೆ ಮುಕ್ಕಾಗುವುದು ಖಂಡಿತಾ ಬೇಡ ಎಂದು ಸಲಹೆ ನೀಡಿದ್ದಾರೆ.


