Thursday, September 19, 2024
Google search engine
Homeಮುಖಪುಟಮಾಜಿ ಸಿಎಂ ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆ

ಮಾಜಿ ಸಿಎಂ ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆ

2018ರಲ್ಲಿ ವಿವಾಹವಾದ ನಂತರ ಅವರು ಮತ್ತು ಡಾ.ನೀರಜ್ ಆರು ತಿಂಗಳ ಹಿಂದೆ ಮಗುವನ್ನು ಹೊಂದಿದ್ದರು. ಸೌಂದರ್ಯ ಮಾನಸಿಕ ಯಾತನೆಯಿಂದ ಬಳಲುತ್ತಿದ್ದಳು ಮತ್ತು ಆಕೆಯ ಆತ್ಮಹತ್ಯೆಯ ಹಿಂದೆ ವೈಯಕ್ತಿಕ ಕಾರಣಗಳಿವೆ ಎಂದು ಆಕೆಯ ಕುಟುಂಬದ ಸದಸ್ಯರು ಶಂಕಿಸಿದ್ದಾರೆ.

ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೊಮ್ಮಗಳು ವಿ.ವೈ. ಡಾ.ಸೌಂದರ್ಯ ಶುಕ್ರವಾರ ಬೆಂಗಳೂರಿನ ಅಪಾರ್ಟ್ ಮೆಂಟ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸೌಂದರ್ಯ ಅವರು ಬೆಳಗ್ಗೆ 10 ಗಂಟೆಯ ಸುಮಾರಿಗೆ ತನ್ನ ಮಲಗುವ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದೆ. ಆಕೆಯ ಪತಿ ಡಾ.ನೀರಜ್ ಪತ್ನಿ ನೇಣಿಗೆ ಶರಣಾಗಿರುವುದನ್ನು ನೋಡಿದರು ಎಂದು ಹೇಳಲಾಗಿದೆ.

ಕೊಟಡಿ ಬಾಗಿಲು ಹಾಕಿಕೊಂಡಿದ್ದು ಬಾಗಿಲು ತಟ್ಟಿದರೂ ಸೌಂದರ್ಯ ಸ್ಪಂದಿಸಲಿಲ್ಲ ಎಂದು ಮನೆಗೆಲಸ ಮಹಿಳೆ ಹೇಳಿದ್ದಾರೆ.

ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಸೌಂದರ್ಯ ಅವರ ಶವ ಪರೀಕ್ಷೆ ನಡೆಸಿದ ವೈದ್ಯರು, ಆಕೆಯ ಕುತ್ತಿಗೆಯಲ್ಲಿ ಗುರುತು ಇತ್ತು. ಮೂವರು ವೈದ್ಯರ ತಂಡ ಮರಣೋತ್ತರ ಪರೀಕ್ಷೆ ನಡೆಸಿತು ಎಂದು ತಿಳಿಸಿದ್ದಾರೆ.

ಮರಣೋತ್ತರ ಪರೀಕ್ಷೆಯ ವರದಿನ್ನು ತಹಸೀಲ್ದಾರ್ ಅವರಿಗೆ ಸಲ್ಲಿಸಲಾಗಿದೆ. ಶವವನ್ನು ಆಕೆಯ ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಲಾಗಿದೆ ಎಂದು ವೈದ್ಯರು ಹೇಳಿದ್ದಾರೆ.

ಯಡಿಯೂರಪ್ಪ ಅವರ ಎರಡನೇ ಪುತ್ತಿ ಪದ್ಮಾವತಿ ಮತ್ತು ವಿರೂಪಾಕ್ಷಪ್ಪ ಯಮಕನಮರಡಿ ಅವರ ಪುತ್ರಿ ಸೌಂದರ್ಯ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗಿದೆ.

2018ರಲ್ಲಿ ವಿವಾಹವಾದ ನಂತರ ಅವರು ಮತ್ತು ಡಾ.ನೀರಜ್ ಆರು ತಿಂಗಳ ಹಿಂದೆ ಮಗುವನ್ನು ಹೊಂದಿದ್ದರು. ಸೌಂದರ್ಯ ಮಾನಸಿಕ ಯಾತನೆಯಿಂದ ಬಳಲುತ್ತಿದ್ದಳು ಮತ್ತು ಆಕೆಯ ಆತ್ಮಹತ್ಯೆಯ ಹಿಂದೆ ವೈಯಕ್ತಿಕ ಕಾರಣಗಳಿವೆ ಎಂದು ಆಕೆಯ ಕುಟುಂಬದ ಸದಸ್ಯರು ಶಂಕಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular