ಉತ್ತರ ಪ್ರದೇಶದಲ್ಲಿ ಲವ್ ಜಿಹಾದ್ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳಿಗೆ ಕನಿಷ್ಠ 10 ವರ್ಷ ಜೈಲು, 1 ಲಕ್ಷ ರೂಪಾಯಿ ದಂಡ ವಿಧಿಸುವುದಾಗಿ ಬಿಜೆಪಿ ಪ್ರಣಾಳಿಕೆಯಲ್ಲಿ ಹೇಳಿದೆ.
ಇನ್ನೊಂದೆಡೆ ನೀರಾವರಿ ಮಾಡುವ ರೈತರಿಗೆ ಉಚಿತ ವಿದ್ಯುತ್ ನೀಡುವ ಭರವಸೆ ನೀಡಿದೆ. ಅಷ್ಟೇ ಅಲ್ಲ ಕನಿಷ್ಟ ಬೆಂಬಲ ಬೆಲೆಯಡಿ ಗೋಧಿ ಮತ್ತು ಭತ್ತದ ಖರೀದಿಯನ್ನು ಮಾಡುವುದಾಗಿ ಭರವಸೆ ನೀಡಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿ ರಾಣಿ ಲಕ್ಷ್ಮೀಬಾಯಿ ಯೋಜನೆಯಡಿ ಪ್ರತಿಭಾವಂತ ಕಾಲೇಜಿಗೆ ಹೋಗುವ ವಿದ್ಯಾರ್ಥಿನಿಯರಿಗೆ ಉಚಿತ ಸ್ಕೂಟಿ ಭರವಸೆ ಕೊಡಲಾಗಿದೆ.
60 ವರ್ಷಕ್ಕಿಂತ ಮೇಲ್ಪಟಟ ಮಹಿಳೆಯರಿಗೆ ಉಚಿತ ಸಾರ್ವಜನಿಕ ಸಾರಿಗೆಯನ್ನು ಒದಗಿಸುವುದಾಗಿ ಪ್ರಣಾಳಿಕೆಯಲ್ಲಿ ಹೇಳಲಾಗಿದೆ. ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ದೀಪಾವಳಿ ಮತ್ತು ಹೋಳಿ ಸಂದರ್ಭದಲ್ಲಿ ಎರಡಯ ಉಚಿತ ಎಲ್.ಪಿ.ಜಿ ಸಿಲಿಂಡರ್ ಗಳನ್ನು ನೀಡಲಾಗುವುದು ಎಂದು ಭರವಸೆ ನೀಡಿದೆ.
ಇದೇ ವೇಳೆ ಭಾರತೀಯ ಜನತಾ ಪಕ್ಷವು ಗೋವಾ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಮನೆ ಮಾಲಿಕರನ್ನು ಸಶಕ್ತಗೊಳಿಸಲು ಒಂದು ವರ್ಷದಲ್ಲಿ ಮೂರು ಉಚಿತ ಗ್ಯಾಸ್ ಸಿಲಿಂಡರ್ ಗಳನ್ನು ನೀಡಲಾಗುವುದು ಎಂದು ಹೇಳಿದೆ.