ರಾಜ್ಯದ ಕೆಲವು ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಈ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ.
ಚರ್ಚೆಯಾದ ಮಹತ್ವದ ಪ್ರಶ್ನೆಗಳ ದೃಷ್ಟಿಯಿಂದ ಈ ವಿಷಯದಲ್ಲಿ ವಿಸ್ತೃತ ಪೀಠವನ್ನು ರಚಿಸಬಹುದೇ ಎಂಬುದನ್ನು ನಿರ್ಧರಿಸಲು ನ್ಯಾಯಾಲಯ ಪರಿಗಣಿಸಿದೆ ಎಂದು ಮುಖ್ಯ ನ್ಯಾಯಮೂರ್ತಿ ದೀಕ್ಷಿತ್ ಹೇಳಿದರು.
ಮುಸ್ಲಿಂ ಹುಡುಗಿಯರು ತರಗತಿಯಲ್ಲಿ ಹಿಜಾಬ್ ಧರಿಸದಂತೆ ಶಾಲೆಗಳು ಮತ್ತು ಕಾಲೇಜುಗಳು ಆದೇಶಿಸಬಹುದೇ ಎಂಬ ನಿರ್ಧಾರವನ್ನು ಕರ್ನಾಟಕ ಹೈಕೋರ್ಟ್ ವಿಸ್ತೃತ ಪೀಠಕ್ಕೆ ರವಾನಿಸಿದೆ.
ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ, ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದಕ್ಕೆ ಸಂಬಂಧಿಸಿದಂತೆ ಪರಿಹಾರ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿತು.
ಇದು ಮುಖ್ಯ ನ್ಯಾಯಮೂ್ರ್ತಿಗಳ ತನಿಖೆಗೆ ಸೂಕ್ತವಾದ ಪ್ರಕರಣವಾಗಿದೆ. ಮುಖ್ಯ ನ್ಯಾಯಮೂರ್ತಿಗಳ ಪೀಠವು ಪ್ರಕರಣದ ವಿಚಾರಣೆಗೆ ವಿಸ್ತೃತ ಪೀಠವನ್ನು ರಚಿಸುವ ಅಧಿಕಾರವನ್ನು ಹೊಂದಿದೆ.
ಈ ವಿಷಯವು ತುರ್ತು ವಿಚಾರಣೆಯ ಅಗತ್ಯವಿದೆ. ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ ದೂರುಗಳ ಮತ್ತು ದಾಖಲೆಗಳನ್ನು ಸಲ್ಲಿಸಿ ಎಂದು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಹೇಳಿದರು.