ಉಡುಪಿಯ ಸರ್ಕಾರಿ ಜಿ.ಶಂಕರ್ ಸ್ಮಾರಕ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಅಂತಿಮ ವರ್ಷದ ಸುಮಾರು 60 ವಿದ್ಯಾರ್ಥಿಗನಿಯರು ಹಿಜಾಬ್ ತೆಗೆಯಲು ನಿರಾಕರಿಸಿ ಮನೆಗೆ ಮರಳಿದರು.
ಪದವಿ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದರೂ ಈ ಕಾಲೇಜಿನಲ್ಲಿ ಹಿಜಾಬ್ ಧರಿಸುವುದಕ್ಕೆ ವಿರೋಧ ವ್ಯಕ್ತವಾಗಿದೆ. ಹಾಗಾಗಿ ನಾವು ಹಿಜಾಬ್ ತೆಗೆಯುವುದಿಲ್ಲ. ಮನೆಗೆ ಮರಳುತ್ತೇವೆ ಎಂದು ವಿದ್ಯಾರ್ಥಿನಿಯರು ಹೇಳಿದ್ದಾರೆ.
ಹಿಜಾಬ್ ತೆಗೆಯುವ ವಿಚಾರದಲ್ಲಿ ವಿದ್ಯಾರ್ಥಿನಿಯರು ಮತ್ತು ಕಾಲೇಜು ಆಡಳಿತ ಮತ್ತು ಸಿಬ್ಬಂದಿ ವಾಗ್ವಾದ ನಡೆಯಿತು. ಸ್ಕಾರ್ಫ್ ಇಲ್ಲದೆ ತರಗತಿಗಳಿಗೆ ಹಾಜರಾಗುವುದಿಲ್ಲ ಎಂದು ವಿದ್ಯಾರ್ಥಿನಿಯರು ಪಟ್ಟುಹಿಡಿದರು. ಹಿಜಾಬ್ ಮತ್ತು ಶಿಕ್ಷಣ ಎರಡೂ ನಮಗೆ ಮುಖ್ಯ ಎಂದು ವಿದ್ಯಾರ್ಥಿನಿಯರು ಹೇಳಿದರು ಎಂದು ಮಾಧ್ಯಮಗಳು ವರದಿ ಮಾಡಿವೆ.
ಮಾಧ್ಯಮಗಳೊಂದಿಗೆ ಮಾತನಾಡಿದ ವಿದ್ಯಾರ್ಥಿನಿಯರು ಪದವಿ ಕಾಲೇಜುಗಳಲ್ಲಿ ಹಿಜಾಬ್ ನಿಯಮ ಜಾರಿ ಮಾಡಿಲ್ಲ ಎಂಬುದನ್ನು ಸಿಎಂ ಸ್ಪಷ್ಟಪಡಿಸಿದ್ದಾರೆ. ನಾವು ಅದರ ಬಗ್ಗೆ ಕೇಳಿದರೆ ಕಾಲೇಜು ಸಮಿತಿಯ ನಿರ್ಧಾರ ಮಾತ್ರ ಇಲ್ಲಿ ಅನ್ವಯಿಸುತ್ತದೆ ಎಂದು ಅವರು ಹೇಳಿದರು.
ಹಿಜಾಬ್ ತಮ್ಮ ಜೀವನದ ಭಾಗವಾಗಿದೆ ಮತ್ತು ಅವರು ಅದನ್ನು ತರಗತಿಗೆ ತೆರಳುವಾಗಲೂ ಧರಿಸುತ್ತಾರೆ. ಯಾರಾದರೂ ನೀವು ಇದನ್ನು ಮಾಢಲು ಇದ್ದಕ್ಕಿದ್ದಂತೆ ಕೇಳಿದರೆ ತೆಗೆದುಹಾಕಲು ಸಾಧ್ಯವಿಲ್ಲ. ನಮಗೆ ಆನ್ ಲೈನ್ ತರಗತಿಗಳನ್ನು ನಡೆಸುವಂತೆ ಆಡಳಿತ ಮಂಡಲಿಗೆ ಮನವಿ ಮಾಡಿದ್ದೇವೆ ಎಂದು ವಿದ್ಯಾರ್ಥಿನಿಯರು ಸ್ಪಷ್ಟಪಡಿಸಿದರು.
ಹೈಕೋರ್ಟ್ ತೀರ್ಪು ನೀಡುವವರೆಗೂ ದೈಹಿಕ ತರಗತಿಗಳಿಗೆ ಹಾಜರಾಗುವುದಿಲ್ಲ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ. ಕಾಲೇಜಿನಲ್ಲಿ ತರಗತಿಗಳು ಸುಗಮವಾಗಿ ನಡೆಯುತ್ತಿವೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಕಾಲೇಜು ಆವರಣದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದರು.
ಉಡುಪಿ ಹೆಚ್ಚುವರಿ ಪೊಲೀಸ್ ವರಿಷ್ಠ ಸಿದ್ದಲಿಂಗಪ್ಪ ಅವರ ಹೇಳಿಕೆಯನ್ನು ಉಲ್ಲೇಖಿಸಿರುವ ಇಂಡಿಯನ್ ಎಕ್ಸ್ ಪ್ರೆಸ್ ಎರಡನೇ ದಿನವೂ ಜಿಲ್ಲೆಯ ಎಲ್ಲಾ ಕಾಲೇಜುಗಳಲ್ಲಿ ಪರಿಸ್ಥಿತಿ ಶಾಂತವಾಗಿದೆ. ಹಿಜಾಬ್ ತೆಗೆಯಲು ಇಚ್ಚಿಸುವ ಮುಸ್ಲೀಂ ವಿದ್ಯಾರ್ಥಿನಿಯರಿಗೆ ಸರ್ಕಾರಿ ಜೆ. ಶಂಕರ್ ಕಾಲೇಜಿನಲ್ಲಿ ತರಗತಿಗಳಿಗೆ ಹಾಜರಾಗಲು ಅವಕಾಶ ನೀಡಲಾಗಿದೆ ಎಂಬುದನ್ನು ವರದಿ ಮಾಡಿದೆ.