ಹಿಜಾಬ್ ಧರಿಸುವುದು ಇಸ್ಲಾಂ ಧರ್ಮದ ಅತ್ಯಗತ್ಯವಾದ ಧಾರ್ಮಿಕ ಆಚರಣೆ ಅಲ್ಲ ಮತ್ತು ಅದನ್ನು ತಡೆಯುವುದು ಧಾರ್ಮಿಕ ಸ್ವಾತಂತ್ರ್ಯ ಸಾಂವಿಧಾನಿಕ ಭರವಸೆಯನ್ನು ಉಲ್ಲಂಘಿಸುವುದಿಲ್ಲ ಎಂದು ಕರ್ನಾಟಕ ಸರ್ಕಾರ ಹೈಕೋರ್ಟ್ ನಲ್ಲಿ ವಾದಿಸಿದೆ.
ಈ ಮೂಲಕ ತರಗತಿ ಕೊಠಡಿಗಳಲ್ಲಿ ಸ್ಕಾರ್ಪ್ ನಿಷೇಧಿಸುವ ಆದೇಶವನ್ನು ಸಮರ್ಥಿಸಿಕೊಂಡಿದೆ. ಹಿಜಾಬ್ ಧರಿಸುವುದು ಇಸ್ಲಾಂ ಧರ್ಮದ ಅತ್ಯಗತ್ಯ ಧಾರ್ಮಿಕ ಭಾಗವಲ್ಲ ಎಂಬ ನಿಲುವನ್ನು ನಾವು ತೆಗೆದುಕೊಂಡಿದ್ದೇವೆ ಎಂದು ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವಡಗಿ ತಿಳಿಸಿದರು.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಜೆ.ಎಂ. ಖಾಜಿ ಮತ್ತು ನ್ಯಾಯಮೂರ್ತಿ ಕೃಷ್ಣ ಎಂ ದೀಕ್ಷಿತ್ ಅವರಿದ್ದ ಮೂರು ಸದಸ್ಯರ ಪೀಠದ ಗಮನ ಸೆಳೆದರು.
ರಾಜ್ಯದ ಅನೇಕ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಿಷೇಧದ ವಿರುದ್ಧ ಪ್ರತಿಭಟನೆಗಳು ಮತ್ತು ಪ್ರತಿಪ್ರತಿಭಟನೆಗಳು ನಡೆಯುತ್ತಿವೆ. ಸಮಾನತೆ, ಸಮಗ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವ ಬಟ್ಟೆಳನ್ನು ನಿಷೇಧಿಸಿ ಫೆಬ್ರವರಿ 5ರ ಆದೇಶದ ಬಗ್ಗೆ ಕಾನೂನುಬಾಹಿರ ಏನೂ ಇಲ್ಲ ಎಂದು ನಾವಡಗಿ ಹೇಳಿದರು.
ಸರ್ಕಾರಿ ಆದೇಶದಲ್ಲಿ ಹಿಜಾಬ್ ಸಮಸ್ಯೆ ಇಲ್ಲ. ಸರ್ಕಾರಿ ಆದೇಶವು ನಿರುಪದ್ರವ ಸ್ವರೂಪವನ್ನು ಹೊಂದಿದೆ. ಇದು ಅರ್ಜಿದಾರರ ಹಕ್ಕುಗಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದರು. ವಿದ್ಯಾರ್ಥಿನಿಯರು ತರಗತಿಯಲ್ಲಿ ಹಿಜಾಬ್ ಹಾಕಿಕೊಂಡು ಬರುವುದನ್ನು ಅನುಮತಿ ನೀಡುವುದನ್ನು ಕಾಲೇಜುಗಳ ನಿರ್ಧರಿಸಬಹುದು ಎಂದು ತಿಳಿಸಿದರು.
ರಾಜ್ಯದ ಪ್ರಜ್ಞಾಪೂರ್ವಕ ನಿಲುವು ಎಂದರೆ ನಾವು ಧಾರ್ಮಿಕ ವಿಷಯದಲ್ಲಿ ಮಧ್ಯಪ್ರವೇಶಿಸಲು ಬಯಸುವುದಿಲ್ಲ. ಹಿಜಾಬ್ ಜಾತ್ಯತೀತೆ ಮತ್ತು ಸುವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಹೇಳಬಹುದಿತ್ತು. ಅಷ್ಟೇ ಅಲ್ಲ ಅದಕ್ಕೆ ಅನುಮತಿ ನೀಡುವುದಿಲ್ಲ ಎಂದು ಹೇಳಬಹುದಿತ್ತು. ಅದನ್ನು ನಾವು ಮಾಡಿಲ್ಲ. ಇದು ರಾಜ್ಯ ಸರ್ಕಾರದ ಹೇಳಿಕೆಯಾಗಿದೆ ಎಂದರು.