ಕಾಂಗ್ರೆಸ್ ಅಲ್ಪಸಂಖ್ಯಾತ ಶಾಸಕರ ನಿಯೋಗವು ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ಭೇಟಿ ಮಾಡಿ ಹಿಜಾಬ್ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಮನವಿ ಸಲ್ಲಿಸಿತು.
ಉಡುಪಿ ಜಿಲ್ಲೆಯಲ್ಲಿ ಪ್ರಾರಂಭವಾಗಿರುವ ಶಾಲಾ-ಕಾಲೇಜು ವಿದ್ಯಾರ್ಥಿನಿಯರ ಹಿಜಾಬ್ ಗೆ ಸಂಬಂಧಪಟ್ಟ ವಿವಾದ ಇದೀಗ ರಾಜ್ಯಾದ್ಯಂತ ಪ್ರತಿಧ್ವನಿಸುತ್ತಿದ್ದು ಹೈಕೋರ್ಟ್ ಮೆಟ್ಟಿಲೇರಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ನೇತೃತ್ವದ ನಿಯೋಗವು ಗೃಹ ಸಚಿವರ ಗಮನ ಸೆಳೆದಿದೆ.
ಉಡುಪಿಯಲ್ಲಿ ಈ ವಿವಾದ ಹೇಗೆ ಪ್ರಾರಂಭವಾಯಿತು. ಇದರ ಹಿಂದೆ ಯಾರು ಇದ್ದಾರೆ ಎಂದು ತನಿಖೆ ನಡೆಸಿ ಸತ್ಯಾಂಶವನ್ನು ಜನರ ಮುಂದೆ ಬಹಿರಂಗಪಡಿಸಬೇಕು ಎಂದು ವಿಧಾನಸಭೆ ಉಪ ನಾಯಕ ಯು.ಟಿ.ಖಾದರ್ ಒತ್ತಾಯಿಸಿದ್ದಾರೆ.
ಸ್ಥಳೀಯ ಶಾಸಕರ ಕೋರಿಗೆ ಮೇರೆಗೆ ಸೂಕ್ತ ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮಾಧ್ಯಮದ ಮೂಲಕ ತಿಳಿಸಿದ್ದೀರಿ. ಇದರ ಜೊತೆಎ ಕುಂದಾಪುರದ ಭಂಡಾರ್ಕರ್ ಕಾಲೇಜು, ಉಡುಪಿಯ ಎಂ.ಜಿ.ಎಂ ಕಾಲೇಜು ಮತ್ತು ಮಂಡ್ಯದ ಪಿ.ಇ.ಎಸ್ ಕಾಲೇಜಿನಲ್ಲಿ ನಡೆದ ಸಮಸ್ಯೆಗೆ ಕಾರಣಕರ್ತರು ಯಾರು ಎಂಬುದು ಎಲ್ಲರಿಗೂ ಗೊತ್ತಾಗಬೇಕು ಎಂದು ಆಗ್ರಹಿಸಿದ್ದಾರೆ.
ಮುಗ್ದ ವಿದ್ಯಾರ್ಥಿಗಳಿಗೆ ಪ್ರಚೋದನೆ ನೀಡಿ ಶಾಲು ಮತ್ತು ಪೇಟವನ್ನು ಹಂಚಿಕೆ ಮಾಡಿದವರು ಯಾರು ಎಂಬುವ ಬಗ್ಗೆ ಕೂಡಲೇ ತನಿಖೆ ನಡೆಸಬೇಕೆಂದು ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ಭೇಟಿ ಮಾಡಿದ ನಿಯೋಗವು ಮನವಿ ಮಾಡಿದ