ವಿವಾದ ಸೃಷ್ಟಿಸಿರುವ ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವಾರವೇ ಪ್ರಕರಣವನ್ನು ವಿಲೇವಾರಿ ಮಾಡಲು ಬಯಸುವುದಾಗಿ ಕರ್ನಾಟಕ ಹೈಕೋರ್ಟ್ ತಿಳಿಸಿದ್ದು ಎಲ್ಲಾ ಪಕ್ಷಗಳ ಸಹಕಾರವನ್ನು ಕೋರಿದೆ.
ನ್ಯಾಯಾಲಯದ ಕಲಾಪಗಳು ಪ್ರಾರಂಭವಾದ ತಕ್ಷಣ, ಅರ್ಜಿದಾರ ಬಾಲಕಿಯರ ಪರ ಹಾಜರಾದ ವಕೀಲರು ರಾಜ್ಯ ಹೈಕೋರ್ಟ್ ನ ಪೂರ್ಣ ಪೀಠಕ್ಕೆ ಹಿಜಾಬ್ ನೊಂದಿಗೆ ಶಾಲೆ-ಕಾಲೇಜುಗಳಿಗೆ ಹೋಗಲು ಅವಕಾಶ ನೀಡುವಂತೆ ಕೋರಿದರು.
ಹಿಜಾಬ್ ನಿಷೇಧದ ವಿರುದ್ಧ ನ್ಯಾಯಾಲಯದ ಮೊರೆ ಹೋಗಿದ್ದರು. ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ, ನ್ಯಾಯಮೂರ್ತಿ ಜೆ.ಎಂ.ಖಾಜಿ ಮತ್ತು ನ್ಯಾಯಮೂರ್ತಿ ಕೃಷ್ಣ ಎಂ ದೀಕ್ಷಿತ್ ಪೂರ್ಣ ಪೀಠಕ್ಕೆ ಹಿಜಾಬ್ ಧರಿಸಿ ಶಾಲೆಗಳಿಗೆ ಹೋಗಲು ಅವಕಾಶ ನೀಡುವಂತೆ ವಿದ್ಯಾರ್ಥಿನಿಯರು ಕೋರಿದ್ದು ಆ ಅರ್ಜಿಗಳ ವಿಚಾರಣೆ ನಡೆಸುತ್ತಿದೆ.
ಈ ಪ್ರಕರಣವನ್ನು ಈ ವಾರವೇ ಮುಗಿಸಲು ನಾವು ಬಯಸುತ್ತೇವೆ. ಈ ವಾರದ ಅಂತ್ಯದೊಳಗೆ ಈ ಪ್ರಕರಣವನ್ನು ಪೂರ್ಣಗೊಳಿಸಲು ಎಲ್ಲಾ ಪ್ರಯತ್ನಗಳನ್ನು ಮಾಡುವುದಾಗಿ ಮುಖ್ಯ ನ್ಯಾಯಮೂರ್ತಿ ಹೇಳಿದರು.


