Saturday, March 14, 2026
Google search engine
Homeಮುಖಪುಟಹಿಜಾಬ್ ಪ್ರಕರಣದ ಅರ್ಜಿದಾರಳ ಸಹೋದರನ ಮೇಲೆ ಸಂಘಪರಿವಾರ ದಾಳಿ - ಆರೋಪ

ಹಿಜಾಬ್ ಪ್ರಕರಣದ ಅರ್ಜಿದಾರಳ ಸಹೋದರನ ಮೇಲೆ ಸಂಘಪರಿವಾರ ದಾಳಿ – ಆರೋಪ

ನನ್ನ ಸಹೋದರನ ಮೇಲೆ ಗುಂಪೊಂದು ಅಮಾನುಷವಾಗಿ ಹಲ್ಲೆ ನಡೆಸಿದೆ. ನಾನು ನನ್ನ ಹಕ್ಕಾಗಿರುವ ನನ್ನ ಹಿಜಾಬ್ ಗಾಗಿ ಹೋರಾಡುತ್ತಿದ್ದೇನೆ ಎಂಬ ಕಾರಣಕ್ಕಾಗಿ ನಮ್ಮ ಆಸ್ತಿಯನ್ನು ಹಾಳು ಮಾಡಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ರಾಜ್ಯದ ಹೈಕೋರ್ಟ್ ನಲ್ಲಿ ಹಿಜಾಬ್ ಪ್ರಕರಣ ದಾಖಲಿಸಿರುವುದರಿಂದ ತನ್ನ ಸಹೋದರನ ಮೇಲೆ ಸಂಘಪರಿವಾರದ ಗೂಂಡಾಗಳು ಹಲ್ಲೆ ನಡೆಸಿ, ಆಸ್ತಿ ಪಾಸ್ತಿ ಹಾನಿಗೊಳಿಸಿದ್ದಾರೆ ಎಂದು ಅರ್ಜಿದಾರರಲ್ಲಿ ಒಬ್ಬರಾದ ಹಜ್ರಾ ಶಿಫಾ ಆರೋಪಿಸಿದ್ದಾರೆ.

ದಾಳಿಕೋರರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಶಿಫಾ ಸರಣಿ ಟ್ವೀಟ್ ಮಾಡಿ ಒತ್ತಾಯಿಸಿದ್ದಾರೆ.

ನನ್ನ ಸಹೋದರನ ಮೇಲೆ ಗುಂಪೊಂದು ಅಮಾನುಷವಾಗಿ ಹಲ್ಲೆ ನಡೆಸಿದೆ. ನಾನು ನನ್ನ ಹಕ್ಕಾಗಿರುವ ನನ್ನ ಹಿಜಾಬ್ ಗಾಗಿ ಹೋರಾಡುತ್ತಿದ್ದೇನೆ ಎಂಬ ಕಾರಣಕ್ಕಾಗಿ ನಮ್ಮ ಆಸ್ತಿಯನ್ನು ಹಾಳು ಮಾಡಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ನನ್ನ ಹಕ್ಕನ್ನು ನಾನು ಕೇಳಲಾರೆ? ಅವರ ಮುಂದಿನ ಬಲಿಪಶು ಯಾರು? ಸಂಘಪರಿವಾರದ ಗೂಂಡಾಗಳ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ನಾನು ಒತ್ತಾಯ ಮಾಢುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

150 ಜನರ ಗುಂಪು ಸೈಫ್ ಮೇಲೆ ಹಲ್ಲೆ ನಡೆಸಿದೆ ಎಂದು ಶಿಫಾಗೆ ಪರಿಚಿತರಾಗಿರುವ ಮಸೂದ್ ಮನ್ನಾ ಟ್ವೀಟ್ ನಲ್ಲಿ ಹೇಳಿಕೊಂಡಿದ್ದಾರೆ. ಅವರ ಸಹೋದರಿ ಇನ್ನೂ ತನ್ನ ಹಕ್ಕುಗಳಿಗಾಗಿ ಹೋರಾಡುತ್ತಿರುವುದರಿಂದ ಅವರು ಬಲಿಯಾದರು ಎಂಬ ಹೇಳಿಕೆಯನ್ನು ಉಲ್ಲೇಖಿಸಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular