ಪಂಜಾಬ್ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಅವರು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರನ್ನು ಶನಿವಾರ ಭೇಟಿ ಮಾಡಿ ರಾಜ್ಯದಲ್ಲಿ ಸರ್ಕಾರ ರಚಿಸಲು ಹಕ್ಕು ಮಂಡಿಸಿದರು.
ಇದೇ ವೇಳೆ ಮಾನ್ ತಮ್ಮ ಪಕ್ಷದ ಶಾಸಕರ ಬೆಂಬಲ ಪತ್ರವನ್ನು ರಾಜ್ಯಪಾಲರಿಗೆ ಹಸ್ತಾಂತರಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಭಗವಂತ್ ಮಾನ್ ನಾವು ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದೇವೆ. ರಾಜ್ಯಪಾಲರು ಅದನ್ನು ಅನುಮೋದಿಸಿದ್ದಾರೆ ಎಂದು ಹೇಳಿದರು.
ಶುಕ್ರವಾರ ಮೊಹಾಲಿಯಲ್ಲಿ ನಡೆದ ಪಕ್ಷದ ಶಾಸಕರ ಸಭೆಯಲ್ಲಿ 48 ವರ್ಷದ ಮಾನ್ ಅವರನ್ನು ಎಎಪಿ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು. ನವಾನ್ಶಹರ್ ಜಿಲ್ಲೆಯ ಪ್ರಸಿದ್ಧ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಪೂರ್ವಜರ ಗ್ರಾಮವಾದ ಖಟ್ಕರ್ ಕಲಾನ್ನಲ್ಲಿ ಮಾರ್ಚ್ 16 ರಂದು ಮಧ್ಯಾಹ್ನ 12:30 ಕ್ಕೆ ಪ್ರಮಾಣ ವಚನ ಸಮಾರಂಭ ನಡೆಯಲಿದೆ ಎಂದು ಮಾನ್ ಹೇಳಿದರು.
ಮಾನ್ ತಮ್ಮ ಪ್ರಮಾಣ ವಚನ ಸಮಾರಂಭಕ್ಕೆ ಆಪ್ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಆಹ್ವಾನಿಸಿದ್ದಾರೆ. 117 ಸದಸ್ಯ ಬಲದ ಪಂಜಾಬ್ ಅಸೆಂಬ್ಲಿಯಲ್ಲಿ ಎಎಪಿ 92 ಸ್ಥಾನಗಳನ್ನು ಗೆಲ್ಲುವ ಮೂಲಕ ಮನೆಮನೆಗೆ ಲಗ್ಗೆಯಿಟ್ಟಿದೆ.


