ಐದು ರಾಜ್ಯಗಳಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿರುವ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷರನ್ನು ಬದಲಿಸುವ ಕುರಿತು ದೆಹಲಿಯಲ್ಲಿ ಉನ್ನತ ಮಟ್ಟದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯುತ್ತಿದೆ. ಸಭೆಯ ಹೊರಗೆ ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾಗುವಂತೆ ಪಕ್ಷದ ಹಲವು ಮುಖಂಡರು ಮತ್ತು ಕಾರ್ಯಕರ್ತರಿಂದ ಬೆಂಬಲ ವ್ಯಕ್ತಪಡಿಸಿದ್ದಾರೆ.
ಎಐಸಿಸಿ ಪ್ರಧಾನ ಕಚೇರಿ ಬಳಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು, ರಾಹುಲ್ ಅಧ್ಯಕ್ಷರಾಗಬೇಕು ಎಂದು ಒತ್ತಾಯಿಸಿದರು. ಕಾರ್ಯಕರ್ತರು ಕಚೇರಿಗೆ ಪ್ರವೇಶಿಸಲು ಯತ್ನಿಸಿದರೂ ಅವಕಾಶ ನೀಡಲಿಲ್ಲ. ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿದ್ದರಿಂದ ವಾಹನ ಸಂಚಾರಕ್ಕೆ ಅಡ್ಡಿಯಾಯಿತು.
ಪೊಲೀಸರು ಬ್ಯಾರಿಕೇಡ್ ಗಳನ್ನು ಹಾಕಿ ಕಾರ್ಯಕರ್ತರು ಕಚೇರಿ ಒಳ ಪ್ರವೇಶಿಸದಂತೆ ತಡೆದರು. ಅಲ್ಕಾ ಲಂಬಾ ಸೇರಿದಂತೆ ದೆಹಲಿಯ ಕಾಂಗ್ರೆಸ್ ನಾಯಕರ ನೇತೃತ್ವದ ಗುಂಪು ರಾಹುಲ್ ಗಾಂಧಿ ಪಕ್ಷವನ್ನು ಮುನ್ನಡೆಸಲು ಬೆಂಬಲ ವ್ಯಕ್ತಪಡಿಸಿತು. ಇದೇ ವೇಳೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅವರ ಪರವೂ ಕಾರ್ಯಕರ್ತರು ಘೋಷಣೆ ಹಾಕಿದರು.
ಸಭೆಯಲ್ಲಿ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಭಾಷಣದ ಆರಂಭದಲ್ಲೇ ರಾಹುಲ್ ಗಾಂಧಿ ಹೆಸರನ್ನು ಪ್ರಸ್ತಾಪಿಸುತ್ತಾರೆ ಎಂದರೆ ಅದರ ಅರ್ಥ ಏನು ಎಂದು ರಾಹುಲ್ ಗಾಂಧಿ ಅವರ ಬೆಂಬಲಕ್ಕೆ ನಿಂತಿದ್ದಾರೆ.