Monday, March 16, 2026
Google search engine
Homeಮುಖಪುಟ150 ಸ್ಥಾನ ಗೆಲ್ಲಲು ಟಾರ್ಗೆಟ್ ನೀಡಿದ ರಾಹುಲ್ ಗಾಂಧಿ

150 ಸ್ಥಾನ ಗೆಲ್ಲಲು ಟಾರ್ಗೆಟ್ ನೀಡಿದ ರಾಹುಲ್ ಗಾಂಧಿ

ನಾವು ಈ ವಿಚಾರದಲ್ಲಿ ಬಹಳ ಕಟ್ಟುನಿಟ್ಟಾಗಿ ಇರುತ್ತೇವೆ. ನಾವು ಟಿಕೆಟ್ ನೀಡುವಾಗ ಪಕ್ಷದ ಸೇವೆಯನ್ನು ಗಮನಿಸಿ ನೀಡುತ್ತೇವೆ. ಅವರು ಪಕ್ಷಕ್ಕೆ ಪ್ರಾಮಾಣಿಕವಾಗಿದ್ದು ಪಕ್ಷದ ಪ್ರತಿನಿಧಿಯಾಗಿದ್ದರೆ ಅವರಿಗೆ ಸೂಕ್ತ ಅವಕಾಶ, ಸ್ಥಾನಮಾನ ನೀಡಲಾಗುವುದು ಎಂದು ತಿಳಿಸಿದರು.

ಎಲ್ಲಾ ನಾಯಕರು ಒಟ್ಟಾಗಿ ಕೆಲಸ ಮಾಡಿದರೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವುದು ಕಷ್ಟವಲ್ಲ. ಹಾಗಾಗಿ ಮುಂಬರುವ ಚುನಾವಣೆಯಲ್ಲಿ 150ಕ್ಕಿಂತ ಒಂದು ಸ್ಥಾನವೂ ಕಡಿಮೆ ಗೆಲ್ಲಬಾರದು ಎಂದು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಟಾರ್ಗೆಟ್ ನೀಡಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ಸಭೆ ನಡೆಸಿದ ರಾಹುಲ್ ಗಾಂಧಿ ಮುಂಬರುವ ಚುನಾವಣೆಯನ್ನು ಹೇಗೆ ಎದುರಿಸಬೇಕು ಎಂದು ಮಾಹಿತಿ ನೀಡಿದರು.

ಕರ್ನಾಕಟದಲ್ಲಿ ಭ್ರಷ್ಟ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ಇದು ಜನರಿಂದ ಆಯ್ಕೆಯಾದ ಪರಿಪೂರ್ಣ ಸರ್ಕಾರವಲ್ಲ. ಹಣದ ಬಲದಿಂದ ರಚನೆಯಾಗಿರುವ ಅನೈತಿಕ ಸರ್ಕಾರ ಎಂದು ಲೇವಡಿ ಮಾಡಿದರು.

ನಾವು ಮುಂಬರುವ ಚುನಾವಣೆಯನ್ನು ಅಲ್ಪ ಅಂತರದಿಂದ ಗೆಲ್ಲಬಾರದು. ನಾವು ಕನಿಷ್ಠ 150 ಸ್ಥಾನವನ್ನು ಗೆಲ್ಲುವ ಗುರಿ ಇಟ್ಟುಕೊಂಡು ಸಾಗಬೇಕು. ನಾವು ಒಟ್ಟಾಗಿ ಸರಿಯಾದ ವಿಚಾರ ಇಟ್ಟುಕೊಂಡು ಹೋರಾಟ ಮಾಡಿದರೆ ಇದು ಕಷ್ಟವಲ್ಲ. ನಾವು ಪಕ್ಷದ ಸೇವೆ ಮಾಡಿದವರನ್ನು ಪ್ರೋತ್ಸಾಹಿಸುತ್ತೇವೆ. ಕರ್ನಾಟಕದಲ್ಲಿ ಯಾರು ಕೆಲಸ ಮಾಡುತ್ತಿದ್ದಾರೆ, ಯಾರು ಕೆಲಸ ಮಾಡುತ್ತಿಲ್ಲ ಎಂಬುದು ಸ್ಪಷ್ಟವಾಗಿ ಕಾಣುತ್ತದೆ ಎಂದು ಹೇಳಿದರು.

ನಾವು ಈ ವಿಚಾರದಲ್ಲಿ ಬಹಳ ಕಟ್ಟುನಿಟ್ಟಾಗಿ ಇರುತ್ತೇವೆ. ನಾವು ಟಿಕೆಟ್ ನೀಡುವಾಗ ಪಕ್ಷದ ಸೇವೆಯನ್ನು ಗಮನಿಸಿ ನೀಡುತ್ತೇವೆ. ಅವರು ಪಕ್ಷಕ್ಕೆ ಪ್ರಾಮಾಣಿಕವಾಗಿದ್ದು ಪಕ್ಷದ ಪ್ರತಿನಿಧಿಯಾಗಿದ್ದರೆ ಅವರಿಗೆ ಸೂಕ್ತ ಅವಕಾಶ, ಸ್ಥಾನಮಾನ ನೀಡಲಾಗುವುದು ಎಂದು ತಿಳಿಸಿದರು.

ಇಲ್ಲಿ ಮೂರು ವಿಚಾರಗಳ ಬಗ್ಗೆ ಪ್ರಸ್ತಾಪ ಮಾಡುತ್ತೇನೆ. ನಾವು 150 ಸ್ಥಾನ ಗೆಲ್ಲುವ ಗುರಿ ಹೊಂದಬೇಕು. ಪಕ್ಷಕ್ಕೆ ದುರಿದವರಿಗೆ ಆದ್ಯತೆ ನೀಡಬೇಕು. ಮೆರಿಟ್ ಆಧಾರದ ಮೇಲೆ ನಿರ್ಧಾರ ಕೈಗೊಳ್ಳಬೇಕು. ನಮ್ಮ ಕಾರ್ಯಕರ್ತರಿಗೆ ಸೂಕ್ತವಾದ ಮಾನ್ಯತೆ ನೀಡಬೇಕು ಎಂದರು.

ದೇಶದಲ್ಲಿ ನಿರುದ್ಯೋಗ ಸಮಸ್ಯೆ ದೊಡ್ಡದಾಗಿದೆ. ಆರ್ಥಿಕತೆ ಕುಸಿದುಹೋಗಿದೆ. ಬೆಲೆ ಏರಿಕೆ ಹೆಚ್ಚಾಗಿದೆ. ಆರ್ಥಿಕತೆ ದುರ್ಬಲವಾಗಿದೆ. ಇವು ನಮ್ಮ ಮುಂದಿರುವ ಸವಾಲುಗಳು, ನೋಟು ರದ್ದತಿ, ಕೆಟ್ಟ ಜಿಎಸ್.ಟಿ ಪದ್ದತಿ, ಕರಾಳ ಕೃಷಿ ಕಾಯ್ದೆಯಿಂದಾಗಿ ದೇಶಕ್ಕೆ ನಷ್ಟವಾಗಿದೆ. ಬಿಜೆಪಿ ಸರ್ಕಾರ ಜನರಿಗೆ ಉದ್ಯೋಗ ನೀಡಿಲ್ಲ. ಕೈಗಾರಿಕೆಗಳು ನಾಶವಾಗಿವೆ ಎಂದು ಹೇಳಿದರು.

ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. 40ರಷ್ಟು ಕಮಿಷನ್ ಸರ್ಕಾರ ಇದಾಗಿದೆ. ಮೋದಿ ರಾಜ್ಯಕ್ಕೆ ಬಂದು ನಾನು ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತೇನೆ ಎಂದರೆ ರಾಜ್ಯವೇ ನಗಲಿದೆ. ಬಿಜೆಪಿ ಬಡವರ ಹಣವನ್ನು ಕಿತ್ತುಕೊಂಡು ದೊಡ್ಡ ಉದ್ಯಮಿಗಳಿಗೆ ನೀಡುತ್ತಿದ್ದಾರೆ. ದೇಶವನ್ನು ಒಡೆಯುವ ಕೆಲಸದಲ್ಲೂ ನಿರತರಾಗಿದ್ದಾರೆ ಎಂದು ದೂರಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular