ರಾಜ್ಯದಲ್ಲಿ ದ್ವೇಷದ ವಾತಾವರಣ ಹೆಚ್ಚಾಗುತ್ತಿದ್ದು, ಇದನ್ನು ಸಹಿಸಿಕೊಂಡಿರಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಗಳೊಂದಿಗೆ ಮಾತನಾಡಿರುವ ಬಿ.ಎಸ್.ವೈ ರಾಜ್ಯದಲ್ಲಿ ಹೆಚ್ಚುತ್ತಿರುವ ದ್ವೇಷದ ವಾತಾವರಣದ ಬಗ್ಗೆ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಕೆಲವು ಕಿಡಿಗೇಡಿಗಳು ಸೌಹಾರ್ದತೆ ಕದಡುವ ಪ್ರಯತ್ನ ಮಾಡುತ್ತಿದ್ದಾರೆ. ಇದನ್ನು ಯಾವುದೇ ಕಾರಣಕ್ಕೂ ಸರ್ಕಾರ ಸಹಿಸಿಕೊಂಡು ಇರಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಮುಖ್ಯಮಂತ್ರಿಗಳು ಕೂಡ ಎಚ್ಚರಿಕೆಯ ಮಾತುಗಳನ್ನು ಆಡಿದ್ದಾರೆ. ಕಡಿಗೇಡಿಗಳಿಗೆ ನಾನು ಕೂಡ ಕಿವಿಮಾತು ಹೇಳಲು ಬಯಸುತ್ತೇನೆ. ಯಾರೂ ಕೂಡ ಸಾಮರಸ್ಯ ಕದಡಬೇಡಿ. ಮುಸ್ಲಿಮರು ನೆಮ್ಮದಿ ಗೌರವದಿಂದ ಬಾಳಬೇಕಿದೆ ಎಂದು ಹೇಳಿದ್ದಾರೆ.
ಇನ್ನು ಮುಂದೆ ಅಹಿತಕರ ಘಟನೆಗಳು ನಡೆಯದಿರಲಿ. ಇಲ್ಲಿ ಹಿಂದೂ-ಮುಸ್ಲೀಮರು ಒಂದು ತಾಯಿ ಮಕ್ಕಳಂತೆ ಬದುಕಬೇಕು ಎಂದು ಕಿವಿಮಾತು ಹೇಳಿದ್ದಾರೆ ಎಂದು ವಾರ್ತಾಭಾರತಿ ವರದಿ ಮಾಡಿದೆ.