Monday, March 16, 2026
Google search engine
Homeಮುಖಪುಟಬೆಂಗಳೂರು ಭಾರೀ ಮಳೆಗೆ ಇಬ್ಬರು ಕಾರ್ಮಿಕರ ಬಲಿ

ಬೆಂಗಳೂರು ಭಾರೀ ಮಳೆಗೆ ಇಬ್ಬರು ಕಾರ್ಮಿಕರ ಬಲಿ

ಬೆಂಗಳೂರಿನಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಪೈಪ್ ಲೈನ್ ಮಾಡುತ್ತಿದ್ದ ವೇಳೆ ಮಣ್ಣು ಕುಸಿದು ಸಾವನ್ನಪ್ಪಿದ್ದಾರೆ.

ಮೃತ ಕಾರ್ಮಿಕರು ಬಿಹಾರದ ಮೂಲದವರು ಎಂದು ಮಾಧ್ಯಮಗಳು ವರದಿ ಮಾಡಿವೆ. ಉಲ್ಲಾಳ ಉಪನಗರದಲ್ಲಿ ಪೈಪ್ ಲೈನ್ ಕೆಲಸ ಮಾಡುತ್ತಿದ್ದ ವೇಳೆ ಮಣ್ಣು ಕುಸಿದು ಬಿದ್ದ ಪರಿಣಾಮ ಮಣ್ಣಿನಡಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ.

ಮೃತ ಕಾರ್ಮಿಕರನ್ನು ಭರತ್ ಮತ್ತು ಅಂಕಿತ್ ಕುಮಾರ್ ಎಂದು ಗುರುತಿಸಲಾಗಿದೆ.

ಬೆಂಗಳೂರಿನಲ್ಲಿ ಸುರಿದ ಮಳೆಯಿಂದ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದು ಜನರು ಪರದಾಡುವಂತಾಗಿದೆ. ಚರಂಡಿ ನೀರು ರಸ್ತೆ ಹರಿದು ತಗ್ಗು ಪ್ರದೇಶಗಳು ಜಲಾಶಯದಂತೆ ಕಂಡು ಬರುತ್ತಿವೆ.

ಹೊರಮಾವು, ಉಲ್ಲಾಳ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ. ಬುಧವಾರ ಮುಂಜಾನೆಯೂ ಮಳೆ ಸುರಿಯುತ್ತಿದ್ದು ಕಚೇರಿಗಳಿಗೆ ಹೋಗಲು ಪ್ರಯಾಣಿಕರು ಪರದಾಡುತ್ತಿದ್ದಾರೆ.

ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿರುವ ಹಿನ್ನಲೆಯಲ್ಲಿ ಬೆಂಗಳೂರು ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳಲ್ಲಿ ಸಾಕಷ್ಟು ಮಳೆಯಾಗಿದೆ. ಬೆಂಗಳೂರಿನಲ್ಲಿ ಅವಾಂತರ ಸೃಷ್ಟಿಯಾಗಿದ್ದು ರಸ್ತೆಗಳು ನೀರಿನಿಂದ ಜಲಾವೃತವಾಗಿವೆ

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular