Friday, January 30, 2026
Google search engine
Homeಮುಖಪುಟದೇವೇಗೌಡರ ಕ್ಷಮೆ ಯಾಚಿಸುವಂತೆ ಕೆ.ಎನ್.ರಾಜಣ್ಣಗೆ ಡಿ.ಕೆ.ಶಿವಕುಮಾರ್ ಸೂಚನೆ

ದೇವೇಗೌಡರ ಕ್ಷಮೆ ಯಾಚಿಸುವಂತೆ ಕೆ.ಎನ್.ರಾಜಣ್ಣಗೆ ಡಿ.ಕೆ.ಶಿವಕುಮಾರ್ ಸೂಚನೆ

ದೇಶ ಹಾಗೂ ರಾಜ್ಯಕ್ಕೆ ಸೇವೆ ಸಲ್ಲಿಸಿರುವ ಹಿರಿಯ ನಾಯಕ ದೇವೇಗೌಡರ ಆರೋಗ್ಯದ ಬಗ್ಗೆ ಮಾಜಿ ಶಾಸಕ ಕೆ.ಎನ್.ರಾಜಣ್ಣ ನೀಡಿರುವ ಹೇಳಿಕೆ ಖಂಡನೀಯ. ಅಮಾನವೀಯ. ಕೂಡಲೇ ಕೆ.ಎನ್.ರಾಜಣ್ಣ ಅವರು ದೇವೇಗೌಡರ ಕ್ಷಮೆ ಕೇಳುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ.

ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ನಮ್ಮ ಪಕ್ಷ ನಾಯಕ ಕೆ.ಎನ್.ರಾಜಣ್ಣ ಅವರು ಹಿರಿಯ ನಾಯಕ ದೇವೇಗೌಡರ ಪರಿಸ್ಥಿತಿ ಬಗ್ಗೆ ಆಡಿರುವ ಮಾತನ್ನು ಇಡೀ ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ಪಕ್ಷದ ನಾಯಕರಾಗಿ, ವೈಯಕ್ತಿಕವಾಗಿ ಇದನ್ನು ಖಂಡಿಸುತ್ತೇನೆ ಎಂದು ಹೇಳಿದ್ದಾರೆ.

ಯಾರೇ ನಾಯಕರು ಮಾನವೀಯತೆಯನ್ನು ಮೆರೆಯಬೇಕು. ಸಮಾಜ ಹಾಗೂ ದೇಶಕ್ಕೆ ಸೇವೆ ಮಾಡಿರುವ ಹಿರಿಯ ನಾಯಕ ದೇವೇಗೌಡರ ಬಗ್ಗೆ ಇಂತಹ ಹೇಳಿಕೆ ನೀಡಿದ್ದು ಸರಿಯಲ್ಲ. ದೇವೇಗೌಡರು ಪ್ರಧಾನಿಯಾಗಲು ಕಾಂಗ್ರೆಸ್ ಪಕ್ಷವೇ ಬೆಂಬಲ ನೀಡಿತ್ತು. ನಾವು ದೇವೇಗೌಡರನ್ನು ಬಹಳ ಗೌರವಯುತವಾಗಿ ಕಾಣುತ್ತಿದ್ದೇವೆ. ಅಂತಹ ಹಿರಿಯ ನಾಯಕರ ಆರೋಗ್ಯದ ಬಗ್ಗೆ ಈ ರೀತಿ ಮಾತನಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಡಿ.ಕೆ.ಸುರೇಶ್ ಖಂಡನೆ:

ಮಾಜಿ ಪ್ರಧಾನಿ ದೇವೇಗೌಡರ ಕುರಿತು ಕೆ.ಎನ್.ರಾಜಣ್ಣ ಅವರು ನೀಡಿರುವ ಹೇಳಿಕೆ ಖಂಡನೀಯ ಎಂದು ಸಂಸದ ಡಿ.ಕೆ.ಸುರೇಶ್ ತಿಳಿಸಿದ್ದಾರೆ.

ದೇವೇಗೌಡರ ಹಿರಿತನಕ್ಕೆ ನಾವೆಲ್ಲರೂ ತಲೆಬಾಗಬೇಕು. ಸಮಾಜದ ಹಿರಿಯರ ಬಗ್ಗೆ ಇಂತಹ ಹಗುರ ಹೇಳಿಕೆ ನೀಡಿರುವುದು ರಾಜಣ್ಣ ಅವರ ಘನತೆಗೆ ಸೂಕ್ತವಲ್ಲ. ರಾಜಣ್ಣ ಅವರು ಕೂಡಲೇ ಕ್ಷಮೆ ಕೋರಬೇಕು. ಇದು ಅವರ ವೈಯಕ್ತಿಕ ಹೇಳಿಕೆಯಾದರೂ ಅವರು ಕ್ಷಮೆ ಕೋರಬೇಕು ಇಲ್ಲದಿದ್ದರೆ ಸಮಾಜ ಅವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಸುರೇಶ್ ಎಚ್ಚರಿಕೆ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular