ಕೇಂದ್ರ ಸಚಿವರಾದ ಮುಖ್ತಾರ್ ಅಬ್ಬಾಸ್ ನಖ್ವಿ ಮತ್ತು ಆರ್.ಸಿ.ಪಿ ಸಿಂಗ್ ಅವರು ತಮ್ಮ ರಾಜ್ಯಸಭೆಯ ಅವಧಿ ಮುಗಿಯುವ ಒಂದು ದಿನಕ್ಕೆ ಮುಂಚಿತವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜಿನಾಮೆ ಸಲ್ಲಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಹಿಂದಿನ ದಿನ ಮೋದಿ ಅವರು ತಮ್ಮ ಅಧಿಕಾರಾವಧಿಯಲ್ಲಿ ದೆಶಕ್ಕೆ ನೀಡಿದ ಕೊಡುಗೆಗಾಗಿ ಕ್ಯಾಬಿನೆಟ್ ಸಭೆಯಲ್ಲಿ ನಖ್ವಿ ಮತ್ತು ಸಿಂಗ್ ಇಬ್ಬರನ್ನೂ ಶ್ಲಾಘಿಸಿದರು. ಇದು ಅವರ ಅಂತಿಮ ಕ್ಯಾಬಿನೆಟ್ ಸಭೆಯಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.
ಸಚಿವರು ಗುರುವಾರ ರಾಜಿನಾಮೆ ಸಲ್ಲಿಸುತ್ತಿದ್ದಂತೆ ಶುಕ್ರವಾರದಿಂದ ಅವರು ಮಾಜಿ ಸಂಸದರಾಗಿರುತ್ತಾರೆ.
ಬಿಜೆಪಿ ನಾಯಕ ನಖ್ವಿ ಅವರು ರಾಜ್ಯಸಭೆಯ ಉಪ ನಾಯಕರಾಗಿದ್ದಾರೆ. ಸಿಂಗ್ ಅವರು ಜೆಡಿಯು ಕೋಟಾದಿಂದ ಮೋದಿ ಸಂಪುಟದಲ್ಲಿ ಸಚಿವರಾಗಿದ್ದಾರೆ.


